ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಕ್ಯಾಥೊಲಿಕ್ ಸಭಾ ಕೂಳೂರು ಘಟಕದ ವತಿಯಿಂದ ನಿವೇಶನ ರಹಿತರಿಗೆ ಉಚಿತ ಮನೆ ನಿರ್ಮಾಣ

ಕೂಳೂರು, ಮೇ ೨೬: ಕಷ್ಟದಲ್ಲಿದ್ದವರಿಗೆ ನೆರವಾಗುವುದು ದೇವರ ಸೇವೆ ಮಾಡಿದಂತೆ. ಕೆಥೋಲಿಕ್ ಸಭಾ ಕೂಳೂರು ಘಟಕದ ವತಿಯಿಂದ ನಿವೇಶನ ರಹಿತರಿಗೆ ಉಚಿತವಾಗಿ ಮನೆ ನಿರ್ಮಿಸಿಕೊಟ್ಟಿರುವ ಕಾರ್ಯ ಶ್ಲಾಘನೀಯ. ಇಂತಹ ಮಾನವೀಯ ಕಾರ್ಯಗಳು ನಿರಂತರವಾಗಿ ಮುಂದುವರೆಯಲಿ. ಇದು ಇತರರಿಗೂ ಸಮಾಜಮುಖಿ ಕಾರ್ಯಗಳನ್ನು ಮಾಡಲು ಪ್ರೇರಣೆಯಾಗಲಿ ಎಂದು ಮಂಗಳೂರು ಧರ್ಮಕ್ಷೇತ್ರದ ವಿಶ್ರಾಂತ ಧರ್ಮಾಧ್ಯಕ್ಷ ಅ|ವಂ|ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ ಹೇಳಿದರು.ಕೂಳೂರು ಸಂತ ಅಂತೋನಿ ಚರ್ಚ್‌ನ ಕೆಥೋಲಿಕ್ ಸಭಾ ಘಟಕದ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಹಮ್ಮಿಕೊಳ್ಳಲಾದ ಸಮಾಜಮುಖಿ ಕಾರ್ಯಗಳ ಪೈಕಿ ಒಂದಾಗಿರುವ ಬಡಕುಟುಂಬಕ್ಕೆ ಬಂಗ್ರಕೂಳೂರಿನಲ್ಲಿ ಸುಮಾರು ೧೫ ಲ.ರೂ. ವೆಚ್ಚದಲ್ಲಿ ನಿರ್ಮಿಸಲಾದ ಮನೆ ಹಸ್ತಾಂತರ ಹಾಗೂ ಆಶೀರ್ವಚನ ನೆರವೇರಿಸಿ ಅವರು ಮಾತನಾಡಿದರು.ದೈಜಿವರ್ಲ್ಡ್ ಸಂಸ್ಥೆಯ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರು ಮಾತನಾಡಿ, ಕೂಳೂರು ಘಟಕದ ಏಕತೆ ಮತ್ತು ಸಮರ್ಪಣೆ ಶ್ಲಾಘನೀಯ. ಇದು ಕೇವಲ ಮನೆಯಲ್ಲ ಬದಲಾಗಿ, ಸಾಮೂಹಿಕ ಸಹಾನುಭೂತಿಯ ಸಂಕೇತವಾಗಿದೆ. ನಮ್ಮಲ್ಲಿ ಒಳ್ಳೆಯ ಮನಸ್ಸು ಇದ್ದಾಗ ಮಾತ್ರವೇ ಕಷ್ಟದಲ್ಲಿದ್ದವರಿಗೆ ನೆರವಾಗಲು ಸಾಧ್ಯ. ಕೂಳೂರು ಕ್ಯಾಥೊಲಿಕ್ ಸಭಾ ಘಟಕದ ಮನಸ್ಥಿತಿ ಅಗತ್ಯವಿರುವವರಿಗೆ ಸಹಾಯ ಮಾಡಲು ಯಾವಾಗಲೂ ಸಿದ್ಧ ಎಂಬಂತಿದೆ. ಘಟಕದಲ್ಲಿರುವ ಏಕತೆಯಿಂದ ಇದು ಸಾಧ್ಯವಾಗಿದೆ. ಇತರ ಘಟಕಗಳಿಂದಲೂ ಇಂತಹ ಮಾನವೀಯ ಕಾರ್ಯಗಳು ನಡೆಯಬೇಕಿದೆ ಎಂದರು.ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಮಾತನಾಡಿ, ಸಮುದಾಯದಲ್ಲಿ ನಡೆಯುವ ಉದಾರ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸಿದಾಗ ಹೆಚ್ಚಿನ ನೆರವು ಕಾರ್ಯವಾಗಲಿದೆ ಎಂದರು.ಕೆಥೋಲಿಕ್ ಸಭಾ ಕೂಳೂರು ಘಟಕದ ಆಧ್ಯಾತ್ಮಿಕ ನಿರ್ದೇಶಕ ಹಾಗೂ ಕೂಳೂರು ಸಂತ ಅಂತೋನಿ ಚರ್ಚ್‌ನ ಧರ್ಮಗುರು ವಂ| ವಿಕ್ಟರ್ ವಿಜಯ್ ಲೋಬೊ ಅಧ್ಯಕ್ಷತೆ ವಹಿದ್ದರು.ಕೆಥೋಲಿಕ್ ಸಭಾ ಕೂಳೂರು ಘಟಕದ ಅಧ್ಯಕ್ಷ ರೋವಿನ್ ಡಿ’ಸೋಜಾ ಸ್ವಾಗತಿಸಿದರು. ಕಾರ್ಯದರ್ಶಿ ಸವಿತಾ ವೇಗಸ್ ವಂದಿಸಿದರು. ಕ್ಲೆವಿಟಾ ಡಿ’ಸೋಜಾ ನಿರೂಪಿಸಿದರು.ಎಪಿಸ್ಕೋಪಲ್ ಸಿಟಿ ವಲಯದ ಕೆಥೋಲಿಕ್ ಸಭಾದ ಆಧ್ಯಾತ್ಮಿಕ ನಿರ್ದೇಶಕ ವಂ| ಜಾನ್ ವಾಸ್, ಕೆಥೋಲಿಕ್ ಸಭಾದ ವಲಯ ಅಧ್ಯಕ್ಷರಾದ ಐಡಾ ಫುರ್ಟಾಡೊ ಉಪಸ್ಥಿತರಿದ್ದರು. ಗುತ್ತಿಗೆದಾರ ದೀಪಕ್ ಡಿ’ಸೋಜಾ ಅವರನ್ನು ಸಮ್ಮಾನಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ಮೇ 30,ಕುತ್ಲುರು ಸರಕಾರಿ ಶಾಲೆ ಯಲ್ಲಿ ಶಾಲಾ ಆರಂಭೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ

ಮಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಮಾಡಿದ ಕುತ್ಲುರು ಸರಕಾರಿ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಆರಂಭೋತ್ಸವ ಮೇ 30 ರಂದು ನಸೆಯಲಿದೆ. ಕಾಮಗಾರಿಗಳ ಉದ್ಘಾಟನೆ ನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗರಾರ ಕೆ ವಿ ಪ್ರಭಾಕರ್ ನೆರವೇರಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಈ ಸರಕಾರಿ ಶಾಲೆಗೆ ಮುಖ್ಯಮಂತ್ರಿಗಳ ಮಾಧ್ಯಮ ಕೆ ವಿ ಪ್ರಭಾಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಲಕ 2 ಕಂಪ್ಯೂಟರ್ಸ್ ಹಾಗೂ ಪ್ರಾಜೆಕ್ಟ್ರ ರ್ ನೀಡಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗೆ ಪ್ಯಾಂಟ್, ಟೀ ಶರ್ಟ್ ಹಾಗೂ ಸ್ಕೂಲ್ ಬ್ಯಾಗ್ ಗಳನ್ನು ವೈಯಕ್ತಿಕ ಕೊಡುಗೆ ನೀಡಿದ್ದಾರೆ. ಅಲ್ಲದೆ ಶಾಲೆಗೆ ಪೈಂಟ್ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೆ ಶಾಲಾ ಮಕ್ಕಳಿಗೆ ಕರೆದುಕೊಂಡು ಬರಲು ವಾಹನ ವ್ಯವಸ್ಥೆ ಮಾಡಿ ಕೊಡುವುದಾಗಿ ತಿಳಿಸಿದ್ದಾರೆ. ಈ ಸರಕಾರಿ ಶಾಲೆಗೆ ಭರಪೂರ ಕೊಡುಗೆ ನೀಡಿರುವ ಕೆ ವಿ ಪ್ರಭಾಕರ್ ಅವರನ್ನು ಎಲ್ಲರ ಪರವಾಗಿ ವಿದ್ಯಾರ್ಥಿಗಳು ಸನ್ಮಾನಿಸಲಿದ್ದಾರೆಕುತ್ಲುರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ಎಂ ಆರ್ ಪಿ ಎಲ್ ಸಿ ಎಸ್ ಆರ್ ನಿಧಿಯಿಂದ 8 ಲಕ್ಷ ರೂಪಾಯಿ ವೆಚ್ಚದಲ್ಲಿ ಸೌಚಾಲಯ ಹಾಗೂ 8 ಲಕ್ಷ ರೂಪಾಯಿ ದಲ್ಲಿ ಶಾಲಾ ಕೊಥಡಿಗಳಿಗೆ ಟೈಲ್ಸ್ ಹಾಕಲಾಗಿದೆ. ಇದರ ಉದ್ಘಾಟನೆ ಯನ್ನು ಎಂ ಆರ್ ಪಿ ಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ನೆರವೇರಲಿಸಲಿದ್ದಾರೆ. ಶಾಲಾ ಪೈಂಟಿಂಗ್ ನ್ನು ದಕ್ಷಿಣ ಕನ್ನಡ ಪ್ರಭಾರ ಜಿಲ್ಲಾಧಿಕಾರಿ ಡಾ ಆನಂದ್ ಉದ್ಘಾಟಿಸಲಿದ್ದಾರೆ. ಕಂಪ್ಯೂಟರ್ ಕೊಠಡಿ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟ್ಟಧಿಕಾರಿ ಯತೀಶ್ ಎನ್ ಉದ್ಘಾಟಿಸಲಿದ್ದಾರೆ. ಶಾಲಾ ನಾಮ ಫಲಕ ವನ್ನು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಲಿದ್ದಾರೆ. ಹಸಿರೇ ಉಸಿರು ಕಾರ್ಯಕ್ರಮ ವನ್ನು ಧರ್ಮೋತ್ತಾನ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ ನೆರವೇರಿಸಲಿಲಿದ್ದಾರೆ. ಎಲೆಕ್ಟ್ರಿಕಲ್ ವ್ಯವಸ್ಥೆ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮ ದಲ್ಲಿ ಬಿಎಎಸ್ಎಫ್ ಇಂಡಿಯಾ ಲಿಮಿಟೆಡ್ ಸೈಟ್ ಡೈರೆಕ್ಟರ್ ಶ್ರೀನಿವಾಸ್ ಪ್ರಾಣೇಶ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಂತೋಷ್ ಪೈ, ಎಂಎಸ್ಇ ಝೆಡ್ ಮುಖ್ಯ ನಿರ್ವಹಣಾಧಿಕಾರಿ ಸೂರ್ಯ ನಾರಾಯಣ್,,ಜಿಲ್ಲಾ ವಾರ್ತಾ ಅಧಿಕಾರಿ ಖಾದರ್ ಷಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಶಾಲೆಯ ಕೊಠಡಿ ಗಳಲ್ಲಿ ಪ್ರೇಕ್ಷಣಿಯ ಸ್ಥಳಗಳ ಕುರಿತು, ಪರಿಸರ ಕುರಿತು ಚಿತ್ರಗಳನ್ನು ಬಿಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 5 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲೆಗೆ ಪೈಂಟಿಂಗ್ ಮಾಡಲಾಗಿದೆ ಎಂದು ಕುತ್ಲುರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ತಿಳಿಸಿದರು.ಪತ್ರಿಕಾಗೋಷ್ಠಿ ಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

ಕರಾವಳಿ ಸುದ್ದಿ, ಪ್ರಾದೇಶಿಕ ವಾರ್ತೆಗಳು

ಚೆಂಡೆಯಲ್ಲಿ ಪುಳಿಂಚ ಪ್ರಶಸ್ತಿ ಪ್ರದಾನ – ಕೃತಿ ಬಿಡುಗಡೆ. ‘ಧರ್ಮ ಪ್ರಸಾರಕ್ಕೆ ಯಕ್ಷಗಾನದ ಕೊಡುಗೆ ಅಮೂಲ್ಯ’: ಕಲ್ಲಡ್ಕ ಪ್ರಭಾಕರ ಭಟ್

ಬಂಟ್ವಾಳ: ‘ಭಾರತದಲ್ಲಿ ಹಿಂದೂವಾಗಿ ಹುಟ್ಟುವುದು ಪುಣ್ಯವಾಗಿದ್ದು, ಧರ್ಮ ಪ್ರಸಾರಕ್ಕೆ ಯಕ್ಷಗಾನ ಅತ್ಯಮೂಲ್ಯ ಕೊಡುಗೆ ನೀಡಿದೆ. ಯಕ್ಷಗಾನಕ್ಕೆ ಪುಳಿಂಚ ರಾಮಯ್ಯ ಶೆಟ್ಟರ ಸೇವೆ ಸ್ಮರಣೀಯವಾಗಿದ್ದು, ಆ ಪರಂಪರೆಯನ್ನು ಪುತ್ರ ಶ್ರೀಧರ ಶೆಟ್ಟಿ ಪುಳಿಂಚ ಮತ್ತವರ ಪತ್ನಿ ಮುಂದುವರಿಸುತ್ತಿರುವುದು ಶ್ಲಾಘನೀಯವಾಗಿದೆ’ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಸಂಚಾಲಕ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೇಳಿದರು. ಅವರು ಕಲ್ಲಡ್ಕ ಸಮೀಪ ಬಾಳ್ತಿಲ ಗ್ರಾಮದ ಚೆಂಡೆಯಲ್ಲಿ ಶ್ರೀ ಕಲ್ಲುರ್ಟಿ ದೈವಸ್ಥಾನ ಹಾಗೂ ಪುಳಿಂಚ ಸೇವಾ ಪ್ರತಿಷ್ಠಾನ ಜಂಟಿ ಆಶ್ರಯದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ಬೆಜ್ಜದಗುತ್ತು ದಿ.ಪುಳಿಂಚ ರಾಮಯ್ಯ ಶೆಟ್ಟಿ ಅವರ ಸ್ಮರಣಾರ್ಥ ಬೊಳ್ನಾಡುಗುತ್ತು ದಿ.ಸರೋಜಿನಿ ರಾಮಯ್ಯ ಶೆಟ್ಟಿ ಪುಳಿಂಚ ವೇದಿಕೆಯಲ್ಲಿ ಮೇ24,ಶನಿವಾರ ನಡೆದ ಪಂಚಮ ತ್ರೈವಾರ್ಷಿಕ ‘ಪುಳಿಂಚ ಪ್ರಶಸ್ತಿ ಪ್ರದಾನ’ , ಮಂಗಳೂರು ಪುಳಿಂಚ ಚಿಟ್ಸ್(ಒಪಿಸಿ) ಪ್ರೈ.ಲಿಮಿಟೆಡ್ ನ ದಶಮ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.‘ಹಿಂದೂ ಧರ್ಮದ ನಾಶಕ್ಕೆ ನಿರಂತರವಾಗಿ ಪ್ರಯತ್ನ ನಡೆಯುತ್ತಿದ್ದು, ಪಹಲ್ಗಾಮ್ ಘಟನೆಯು ಅದಕ್ಕೊಂದು ಜ್ವಲಂತ ಉದಾಹರಣೆಯಾಗಿದೆ. ದೇಶಕ್ಕೆ ಒಳಗಿನ ಶತ್ರುಗಳು ಅಪಾಯಕಾರಿಯಾಗಿದ್ದು, ಈ ಕುರಿತು ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ’ ಎಂದರು. ‘ಚೆಂಡೆ ಕಲ್ಲುರ್ಟಿ’ ಕೃತಿ ಬಿಡುಗಡೆ:ಸಮಾರಂಭದಲ್ಲಿ ಲೇಖಕ – ಯಕ್ಷಗಾನ ಅರ್ಥಧಾರಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಬರೆದ ‘ಮಹಿಮೆಯ ಮಹಾಮಾತೆ ಚೆಂಡೆ ಕಲ್ಲುರ್ಟಿ’ ಕೃತಿಯನ್ನು ಹೊಸದಿಗಂತ ದಿನಪತ್ರಿಕೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ. ಎಸ್. ಪ್ರಕಾಶ್ ಬಿಡುಗಡೆಗೊಳಿಸಿದರು. ಅಲ್ಲದೆ ಮಂಗಳೂರಿನ ಪ್ರಸಿದ್ಧ ಜ್ಯೋತಿಷಿ ಮತ್ತು ದೈವಜ್ಞರಾದ ಶಶಿ ಕುಮಾರ್ ಪಂಡಿತ್ ಅವರು ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಶಶಿರಾಜ್ ರಾವ್ ಕಾವೂರು ರಚಿಸಿದ ‘ಚೆಂಡೆದಪ್ಪೆನ ಸುಗಿಪು’ ಕನ್ನಡ – ತುಳು ಭಕ್ತಿಗೀತೆಗಳ ಧ್ವನಿ ಮುದ್ರಿಕೆಯನ್ನು ಬಿಡುಗಡೆಗೊಳಿಸಿದರು.ಉದ್ಘಾಟಕರಾದ ಕಲ್ಲಡ್ಕ ಪ್ರಭಾಕರ ಭಟ್ ಕೃತಿಕರ್ತರನ್ನು ಕ್ಷೇತ್ರದ ಪರವಾಗಿ ಸನ್ಮಾನಿಸಿದರು. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮುಖ್ಯ ಅತಿಥಿಗಳಾಗಿದ್ದರು.ಪುಳಿಂಚ ಪ್ರಶಸ್ತಿ -2025 ಪ್ರದಾನ:ಪುಳಿಂಚ ಸೇವಾ ಪ್ರತಿಷ್ಠಾನವು ಕೀರ್ತಿಶೇಷ ಕಲಾವಿದ ಪುಳಿಂಚ ರಾಮಯ್ಯ ಶೆಟ್ಟಿ ಅವರ ಹೆಸರಿನಲ್ಲಿ ತ್ರೈವಾರ್ಷಿಕವಾಗಿ ನೀಡುವ ಪಂಚಮ ಪುಳಿಂಚ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದರಾದ ಬೋಳಾರ ಸುಬ್ಬಯ್ಯ ಶೆಟ್ಟಿ, ಸಂಜಯಕುಮಾರ್ ಶೆಟ್ಟಿ ಗೋಣಿಬೀಡು ಮತ್ತು ಮಿಜಾರು ತಿಮ್ಮಪ್ಪ ಅವರಿಗೆ ಪ್ರದಾನ ಮಾಡಲಾಯಿತು.ಕಳೆದ ವರ್ಷ ನಿಧನರಾದ ಯಕ್ಷಗಾನದ ಹಾಸ್ಯ ಕಲಾವಿದ ದಿ.ಜಯರಾಮ ಆಚಾರ್ಯ ಬಂಟ್ವಾಳ ಅವರಿಗೆ ಮರಣೋತ್ತರ ಪುಳಿಂಚ ಪ್ರಶಸ್ತಿ ನೀಡಲಾಯಿತು.ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ. 25,000/- ನಗದು, ಶಾಲು – ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕ ನೀಡಿ ಗಣ್ಯರು ಸನ್ಮಾನಿಸಿದರು. ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ ಭಾಷಣ ಮಾಡಿದರು.ಚೆಂಡೆ ಕಲ್ಲುರ್ಟಿ ದೈವಸ್ಥಾನದ ಆಡಳಿತದಾರ ಮತ್ತು ಪುಳಿಂಚ ಸೇವಾ ಟ್ರಸ್ಟ್ ಅಧ್ಯಕ್ಷ, ನ್ಯಾಯವಾದಿ ಶ್ರೀಧರ ಶೆಟ್ಟಿ ಪುಳಿಂಚ ಸ್ವಾಗತಿಸಿ ಪ್ರಸ್ತಾವನೆಗೈದರು. ಕಲಾವಿದ ಸಂಜಯಕುಮಾರ್ ಶೆಟ್ಟಿ ಗೋಣಿಬೀಡು ಸಂಸ್ಮರಣಾ ಭಾಷಣ ಮಾಡಿದರು. ಟ್ರಸ್ಟ್ ಕೋಶಾಧಿಕಾರಿ ಪ್ರತಿಭಾ ಶ್ರೀಧರ ಶೆಟ್ಟಿ ವಂದಿಸಿದರು. ಯಕ್ಷಗಾನ ಅರ್ಥಧಾರಿ ಅಶೋಕ್ ಭಟ್ ಉಜಿರೆ ಕಾರ್ಯಕ್ರಮ ನಿರ್ವಹಿಸಿದರು. ಯಕ್ಷಗಾನ ಸಂಘಟಕ ಜನಾರ್ದನ ಅಮ್ಮುಂಜೆ ಸಹಕರಿಸಿದರು.ಸಾಂಸ್ಕೃತಿಕ ರಂಜನೆ:ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ ‘ಕುರುಬನ ರಾಣಿ’ ಹಾಸ್ಯ ಪ್ರಸಂಗ, ‘ಬಲೆ ತೆಲಿಪುಲೆ’ ಹಾಸ್ಯ ವೈಭವ, ‘ಪುದರ್ ದೀತಿಜಿ’ ತುಳು ನಾಟಕ ಜರಗಿತು. ಬಳಿಕ ಚೆಂಡೆ ಕಲ್ಲುರ್ಟಿ ದೈವದ ಕೋಲ ಸೇವೆ ಮತ್ತು ಹರಕೆಯ ಕೋಲ ನಡೆಯಿತು.

ಪ್ರಾದೇಶಿಕ ವಾರ್ತೆಗಳು

ಅಳಿಕೆ ರಾಮಯ್ಯ ರೈ ಸಹಾಯ ನಿಧಿ ಪ್ರದಾನ – ಗೃಹ ಸನ್ಮಾನ. ‘ಪ್ರಯೋಗಶೀಲ ಬಣ್ಣದ ವೇಷಧಾರಿ ಶೆಟ್ಟಿಗಾರ್’: ಡಾ. ಜೋಶಿ

ಮಂಗಳೂರು: ‘ತೆಂಕು ತಿಟ್ಟಿನ ಬಣ್ಣದ ವೇಷಗಾರಿಕೆ ಯಕ್ಷಗಾನ ರಂಗದ ವಿಸ್ಮಯಗಳಲ್ಲೊಂದು. ಅನುಭವೀ ಹಿರಿಯ ಕಲಾವಿದರು ಈ ಪ್ರಕಾರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಅದೇ ಪರಂಪರೆಯ ಜಾಡಿನಲ್ಲಿ ಹೊಸ ಆವಿಷ್ಕಾರದೊಂದಿಗೆ ಜನಮನ ಗೆದ್ದ ಕಲಾವಿದ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್. ಅವರು ಓರ್ವ ಪ್ರಯೋಗಶೀಲ ಬಣ್ಣದ ವೇಷಧಾರಿ’ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ ಹೇಳಿದ್ದಾರೆ. ಬೆಂಗಳೂರಿನ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರಸಿದ್ಧ ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಅವರಿಗೆ ಗೃಹ ಸಮ್ಮಾನದೊಂದಿಗೆ ಅಳಿಕೆ ರಾಮಯ್ಯ ರೈ ಯಕ್ಷ ಸಹಾಯನಿಧಿ ಪ್ರದಾನ ಮಾಡಿದ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಮುಖ್ಯ ಸಲಹೆಗಾರರಾಗಿ ಅವರು ಮಾತನಾಡಿದರು. ಇನ್ನೋರ್ವ ಸಲಹೆಗಾರ ಹಾಗೂ ಸದಾಶಿವ ಶೆಟ್ಟಿಗಾರ್ ಅವರ ಒಡನಾಡಿ ಹಿರಿಯ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು.ನೆರವಿಗಾಗಿ ಮನವಿ:ಆಯ್ಕೆ ಸಮಿತಿ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ ‘ಬಣ್ಣದ ಮಾಲಿಂಗಜ್ಜನ ಗರಡಿಯಲ್ಲಿ ಪಳಗಿದ ಸದಾಶಿವ ಶೆಟ್ಟಿಗಾರ್ ಪಾರಂಪರಿಕ ಶೈಲಿ, ಹೊಸತನದ ಮೆರುಗು ಮತ್ತು ಪ್ರಬುದ್ಧ ಮಾತುಗಾರಿಕೆಯ ಮೂಲಕ ಭರವಸೆಯ ಬಣ್ಣದ ವೇಷಧಾರಿಯಾಗಿ ಬೆಳೆದು ಬಂದವರು. ಗಜೇಂದ್ರ ಮೋಕ್ಷದ ಮಕರ, ರಾಮ ಕಾರುಣ್ಯದ ಕಾಕಾಸುರ ಅವರದೇ ಪರಿಕಲ್ಪನೆಯ ಬಣ್ಣದ ವಿಶಿಷ್ಟ ಮಾದರಿಗಳು. ಪ್ರಸ್ತುತ 60ರ ಹರೆಯದಲ್ಲಿ ಗಂಭೀರ ಕಾಯಿಲೆಗೆ ತುತ್ತಾಗಿ ತೀರಾ ಆರ್ಥಿಕ ಸಂಕಷ್ಟದಲ್ಲಿರುವ ಅವರಿಗೆ ಚಿಕಿತ್ಸೆಗಾಗಿ ದೊಡ್ಡ ಮೊತ್ತದ ಹಣ ಬೇಕಾಗಿದೆ. ಕಲಾಭಿಮಾನಿಗಳು ಉದಾರವಾಗಿ ಸ್ಪಂದಿಸಿದರೆ ಮಾತ್ರ ಯಕ್ಷಗಾನ ರಂಗದಲ್ಲಿ ಮುಂದೆಯೂ ಅವರು ದುಡಿಯಬಲ್ಲರು. ನೆರವು ನೀಡುವವರು ದೂರವಾಣಿ ಮೂಲಕ ಅವರನ್ನು ಸಂಪರ್ಕಿಸಬಹುದು. (ಗೂಗಲ್ ಪೇ ನಂ.9741025189)’ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಅಳಿಕೆ ಸ್ಮಾರಕ ಟ್ರಸ್ಟ್ ಸಂಚಾಲಕ ಅಳಿಕೆ ದುರ್ಗಾ ಪ್ರಸಾದ್ ರೈ ರೂ.20,000/- ಸಹಾಯ ನಿಧಿಯನ್ನು ಅರ್ಪಿಸಿ, ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.ಎತ್ತರದ ವ್ಯಕ್ತಿ ಅಳಿಕೆ:ಸದಾಶಿವ ಶೆಟ್ಟಿಗಾರ್ ಮತ್ತು ಕಲಾವತಿ ದಂಪತಿಗಳನ್ನು ಸಿದ್ಧಕಟ್ಟೆಯ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಸದಾಶಿವ ಶೆಟ್ಟಿಗಾರ್ ‘ಕೀರ್ತಿ ಶೇಷ ಅಳಿಕೆಯವರದು ತುಂಬಾ ಎತ್ತರದ ವ್ಯಕ್ತಿತ್ವ. ಅವರ ಜೊತೆಯಲ್ಲಿ ಒಂದು ವೇಷ ಮಾಡಿದ್ದೇನೆ. ಅವರ ಹೆಸರಿನ ಗೌರವ ಸಿಕ್ಕಿರುವುದಕ್ಕೆ ಧನ್ಯತೆಯ ಭಾವ ಮೂಡಿದೆ’ ಎಂದು ಕೃತಜ್ಞತೆ ಸಲ್ಲಿಸಿದರು.ಕವಿ – ಸಂಘಟಕ ಕೆ.ಲಕ್ಷ್ಮೀನಾರಾಯಣ ರೈ ಹರೇಕಳ ಸನ್ಮಾನ ಫಲಕ ವಾಚಿಸಿದರು. ಟ್ರಸ್ಟ್ ಸದಸ್ಯರಾದ ಮಹಾಬಲ ಶೆಟ್ಟಿ ಬಜನಿ ಗುತ್ತು, ಅಶೋಕ್ ಶೆಟ್ಟಿ ದರ್ಬೆ ಮತ್ತು ಶೆಟ್ಟಿಗಾರ್ ಅವರ ಮನೆಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

ಮಂಗಳೂರು: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು,ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ. ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಖ್ಯಾತ ಉದ್ಯಮಿ, ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರದ ಸಾಧಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು 2025 ಸಾಲಿನ ಆರ್ಯಭಟ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಬಂಟ್ವಾಳ ತಾಲೂಕಿನ ಶಂಭೂರು ಸರಕಾರಿ ಶಾಲೆಯನ್ನು ದತ್ತು ಪಡೆದು ತನ್ನ ಸಹೋದರನ ಸ್ಮರಣಾರ್ಥ ‘ದಿ.ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆ’ ಎಂಬ ಹೆಸರಿನಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿದ್ದಲ್ಲದೆ ತಮ್ಮ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡಿರುವ ಸಮಾಜ ಸೇವೆ ಮತ್ತು ಯಕ್ಷಗಾನ ಸೇವೆಗಾಗಿ ಸಚ್ಚಿದಾನಂದ ಶೆಟ್ಟರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ.ಅಶೋಕ್ ಬಿ. ಹಿಂಚಿಗೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾಕ್ಟರ್ ಎಚ್.ಎಲ್.ಎನ್.ರಾವ್ ಅಧ್ಯಕ್ಷತೆ ವಹಿಸಿದ್ದರು.ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಹಿರಿಯ ಚಲನಚಿತ್ರ ನಟಿಯರಾದ ಪದ್ಮಶ್ರೀ ಭಾರತಿ ವಿಷ್ಣುವರ್ಧನ್, ಡಾ.ಜಯಮಾಲಾ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಸಂಗೀತ ನಿರ್ದೇಶಕ ಪ್ರೇಮಕವಿ ಕೆ.ಕಲ್ಯಾಣ್ ಅತಿಥಿಗಳಾಗಿದ್ದರು.ಸ್ವಾಗತ ಸಮಿತಿಯ ಡಾ.ಕೆ.ಎನ್. ಅಡಿಗ ಅಡೂರು, ಗುರುರಾಜ್, ಡಾ. ಬಸವರಾಜು, ಎಚ್.ಎಸ್. ಹನುಮಂತ ರಾವ್, ಮಂಗಳೂರು ಪ್ರತಿನಿಧಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮೊದಲಾದವರು. ಉಪಸ್ಥಿತರಿದ್ದರು. ಸುಗ್ಗನಹಳ್ಳಿ ಷಡಕ್ಷರಿ ಹಾಗೂ ಸಾರ್ಥವಳ್ಳಿ ನಾರಾಯಣಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಕರ್ನಾಟಕ ಯಕ್ಷ ಭಾರತಿಯಿಂದ ಸೂರ್ಯನಾರಾಯಣ ಭಟ್ ಸನ್ಮಾನ. ‘ಆಕಾಶವಾಣಿಯನ್ನು ಜನರ ಹತ್ತಿರ ತಂದರು’: ಭಾಸ್ಕರ ರೈ ಕುಕ್ಕುವಳ್ಳಿ

ಮಂಗಳೂರು: ‘ಕರಾವಳಿಯ ಜನ ಜೀವನದೊಂದಿಗೆ ಹಾಸು ಹೊಕ್ಕಾಗಿರುವ ಮಂಗಳೂರು ಆಕಾಶವಾಣಿಯಲ್ಲಿ ಸುದೀರ್ಘಕಾಲ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಶ್ರೋತೃಗಳೊಂದಿಗೆ ನಿಕಟ ಬಾಂಧವ್ಯ ಹೊಂದಿರುವ ಸೂರ್ಯನಾರಾಯಣ ಭಟ್ಟರದು ತುಂಬಾ ಕ್ರಿಯಾಶೀಲ ವ್ಯಕ್ತಿತ್ವ. ಯಕ್ಷಗಾನ, ಕೃಷಿ ರಂಗ, ತುಳು – ಕನ್ನಡ ಮತ್ತು ಕೌಟುಂಬಿಕ ಕಾರ್ಯಕ್ರಮಗಳ ಮೂಲಕ ಅವರು ಆಕಾಶವಾಣಿಯನ್ನು ಜನರ ಹತ್ತಿರ ತಂದಿದ್ದಾರೆ’ ಎಂದು ಕರ್ನಾಟಕ ಯಕ್ಷ ಭಾರತಿ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.ಮಂಗಳೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ಮುಖ್ಯಸ್ಥರಾಗಿ ದೀರ್ಘಕಾಲ ಸೇವೆ ಸಲ್ಲಿಸಿ ಈ ಮಾಸಾಂತ್ಯದಲ್ಲಿ ನಿವೃತ್ತರಾಗಲಿರುವ ಪಿ.ಎಸ್. ಸೂರ್ಯನಾರಾಯಣ ಭಟ್ಟರಿಗೆ ಕರ್ನಾಟಕ ಯಕ್ಷ ಭಾರತಿ ಪುತ್ತೂರು ವತಿಯಿಂದ ಗೌರವಾರ್ಪಣೆ ಮಾಡಿ ಅವರು ಮಾತನಾಡಿದರು. ‘ಪ್ರಸ್ತುತ ಪ್ರಸಾರವಾಗುವ ಕಥಾಮೃತ, ಕೃತಿ ಸಂಪದ, ಯಕ್ಷಸಿರಿ, ಸ್ಮೃತಿ – ದ್ವನಿ, ಕಾವ್ಯ ಯಾನ ಇತ್ಯಾದಿ ಬಾನುಲಿ ಕಾರ್ಯಕ್ರಮಗಳ ಹಿಂದೆ ಸೂರ್ಯ ಭಟ್ಟರ ಪರಿಶ್ರಮ ಇದೆ’ ಎಂದವರು ಹೇಳಿದರು. ಕರ್ನಾಟಕ ಯಕ್ಷ ಭಾರತಿ ತಂಡದ ಎಂ.ಕೆ.ರಮೇಶಾಚಾರ್ಯ, ಪಿ.ಟಿ.ಜಯರಾಮ ಭಟ್, ಗಣರಾಜ ಕುಂಬಳೆ, ಪ್ರಶಾಂತ ರೈ ಪುತ್ತೂರು, ಉಮೇಶ ಆಚಾರ್ಯ ಗೇರುಕಟ್ಟೆ, ರಮೇಶ ಸಾಲ್ವಣ್ಕರ್, ಕೋಳ್ಯೂರು ಭಾಸ್ಕರ ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಅವರು ಶಾಲು, ಹಾರ, ಫಲತಟ್ಟೆ ಹಾಗೂ ಸ್ಮರಣಿಕೆ ನೀಡಿ ಸೂರ್ಯನಾರಾಯಣರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಪಿ. ಎಸ್. ಸೂರ್ಯನಾರಾಯಣ ಭಟ್ಟರು ‘ಬಾನುಲಿ ಮಾಧ್ಯಮದ ಮೂಲಕ ಹಲವಾರು ಕಲಾತಂಡಗಳು, ನಾಡಿನ ವಿದ್ವಾಂಸರು ಮತ್ತು ಜನಸಾಮಾನ್ಯರ ಸಂಪರ್ಕ ತನಗಾಗಿದೆ’ ಎಂದು ತಿಳಿಸಿ, ಯಕ್ಷಗಾನ ತಂಡಕ್ಕೆ ಕೃತಜ್ಞತೆ ಸಲ್ಲಿಸಿದರು.ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕರಾದ ಲತೀಶ್ ಪಾಲ್ದನೆ ಹಾಗೂ ತಾಂತ್ರಿಕ ವಿಭಾಗದ ಚಂದ್ರಶೇಖರ ಪಾಣಾಜೆ ,ಅಕ್ಷತಾ ರಾಜ್ ಪೆರ್ಲ, ಚೈತನ್ಯ ಪ್ರಶಾಂತ್, ಚಂದ್ರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಬಳಗದಿಂದ ‘ಕೋಟಿ – ಚೆನ್ನಯ’ ವಿಶೇಷ ತುಳು ಯಕ್ಷಗಾನ ತಾಳಮದ್ದಳೆಯ ಧ್ವನಿ ಮುದ್ರಣ ಜರಗಿತು.

ಪ್ರಾದೇಶಿಕ ವಾರ್ತೆಗಳು

ಭಾರಿ ಗಾಳಿ ಮಳೆಗೆ ಪತ್ರಿಕಾ ಭವನ ಬಳಿ ಉರುಳಿ ಬಿದ್ದ ಮರ, ತಪ್ಪಿದ ಅನಾಹುತ

ಮಂಗಳೂರು, ನಗರದ ಲೇಡಿ ಹಿಲ್ ಉರ್ವಾ ಮಾರ್ಕೆಟ್ ರಸ್ತೆಯಲ್ಲಿ ಇರುವ ಪತ್ರಿಕಾ ಭವನ ಬಳಿ ಶನಿವಾರ ಸಂಜೆ 6 ಗಂಟೆಗೆ ವೇಳೆಗೆ ಭಾರಿ ಗಾಳಿ ಮಳೆಗೆ ಮರವೊಂದು ಉರುಳಿ ಬಿದ್ದಿದೆ. ಕೂಡಲೇ ಮೆಸ್ಕಾಂ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಉರುಳಿ ಬಿದ್ದ ಮರ ತೆರವು ಗೊಳಿಸಿದ್ದಾರೆ.ಈ ಘಟನೆ ಬಳಿಕ ವಿದ್ಯುತ್ ಸಂಪರ್ಕ ಕಡಿತ ಗೊಂಡಿತ್ತು. ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆ ಸಿಬ್ಬಂದಿ ದುರಸ್ತಿ ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಶ್ರೀಮತಿ ಸಂಧ್ಯಾ ಆಚಾರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಾದೇಶಿಕ ವಾರ್ತೆಗಳು

ಸ್ಪರ್ಶ ಬಿ ಶೆಟ್ಟಿಗೆ ಶೇ 96 ಅಂಕ

ಮಂಗಳೂರು ನಗರದ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸ್ಪರ್ಶ ಬಿ ಶೆಟ್ಟಿ 600 (ಶೇ 96) ಅಂಕ ಪಡೆದಿದ್ದಾಳೆ.ಈಕೆ ಬಿಜೈ ಕಾಪಿಕಾಡ್ 3 ನೇ ಕ್ರಾಸ್ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಸಪ್ನಾ ದಂಪತಿಯ ಪುತ್ರಿ.

ಪ್ರಾದೇಶಿಕ ವಾರ್ತೆಗಳು

ಚೆಂಡೆ :ಹಿರಿಯ ಯಕ್ಷಗಾನ ಕಲಾವಿದರಾದ ವಿಷ್ಣುಶರ್ಮ ವಾಟೆಪಡ್ಪು ಹಾಗೂ ಚಂದ್ರಹಾಸ ತುಂಬೆ ಇವರಿಗೆ ಸನ್ಮಾನ.

ಬಂಟ್ವಾಳ :ಹಿರಿಯ ಯಕ್ಷಗಾನ ಕಲಾವಿದ ಕೀರ್ತಿಶೇಷ ಪುಳಿಂಚ ರಾಮಯ್ಯ ಶೆಟ್ಟಿಯವರ ಸುಪುತ್ರ ಶ್ರೀಧರ ಶೆಟ್ಟಿ ಪುಳಿಂಚ ಇವರ ಸೇವಾ ರೂಪವಾಗಿ ಮೇ 23ರಂದು ಶುಕ್ರವಾರ ಬಾಳ್ತಿಲ ಗ್ರಾಮದ ಚೆಂಡೆ ಶ್ರೀ ಕಲ್ಲುರ್ಟಿ ದೇವಸ್ಥಾನದ ವಠಾರದಲ್ಲಿ ಶ್ರೀ ಕಟೀಲು ಮೇಳದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ವಿಷ್ಣುಶರ್ಮ ವಾಟೆಪಡ್ಪು ಹಾಗೂ ಚಂದ್ರಹಾಸ ತುಂಬೆ ಇವರನ್ನು ಗಣ್ಯ ಅಥಿತಿಗಳ ಸಮಕ್ಷಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪಾರಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮುಕ್ತೇಸರರಾದ ರತ್ನಾಕರ ಶೆಟ್ಟಿ ಮೂಡಯೂರು, ಬಾಳ್ತಿಲ ಗ್ರಾ ಪಂ ಅಧ್ಯಕ್ಷ ಚಂದ್ರಶೇಖರ ಪೂಜಾರಿ,ಹಿರಿಯ ವಕೀಲರಾದ ಜಗದೀಶ ಶೇಣವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪ್ರತಿಭಾ ಶ್ರೀಧರ ಶೆಟ್ಟಿ ಹಾಗೂ ಮನೆಯವರ, ಕಲಾಭಿಮಾನಿಗಳ ಗೌರವ ಉಪಸ್ಥಿತಿಯಲ್ಲಿ ಕಲಾವಿದರನ್ನು ಶಾಲು ಫಲಪುಷ್ಪ ಸ್ಮರಣಿಕೆ ಗೌರವನಿಧಿಯೊಂದಿಗೆ ಸನ್ಮಾನಿಸಲಾಯಿತು.ಯಕ್ಷಗಾನ ಸಂಘಟಕ ಬಿ ಜನಾರ್ದನ ಅಮುಂಜೆ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಬಂಟರ ಸಂಘ ಬಂಟವಾಳ ತಾಲೂಕುವಿಂಶತಿ ಸಂಭ್ರಮ: ಉದ್ಘಾಟನಾ ಸಮಾರಂಭ

(ಜಯಾನಂದ ಪೆರಾಜೆ ಬಂಟ್ವಾಳ)ಬಂಟ್ವಾಳ ತಾಲೂಕು ಬಂಟರ ಸಂಘದ ವಿಂತತಿ ಸಂಭ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿ ಬಂಟ ಸಮಾಜದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಬಂಟರ ಸಂಘದ ಬಂಟವಾಳ ತಾಲೂಕು ಸಂಘದ ಸ್ಥಾಪಕ ಅಧ್ಯಕ್ಷ ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಪದಾಧಿಕಾರಿಗಳಾದ ಡಾ.ಪ್ರಶಾಂತ ಮಾರ್ಲ,ಜಗನ್ನಾಥ ಚೌಟ ಬದಿಗುಡ್ಡೆ ,ಲೋಕೇಶ್ ಶೆಟ್ಟಿ ಕುಳ, ರಂಜನ್ ಕುಮಾರ್ ಶೆಟ್ಟಿ ಅರಳ ,ಪ್ರತಿಭಾ ರೈ ಪಾಣೆಮಂಗಳೂರು, ರಮಾ ಎಸ್.ಭಂಡಾರಿ,ನಿಶಾನ್ ಆಳ್ವ ಬಿಸಿರೋಡ್ ಮತ್ತಿತರರು ಉಪಸ್ಥಿತಿದ್ದರು.ಮುಖ್ಯ ಅತಿಥಿಗಳಾಗಿ ರಾಜೇಶ್ ಚೌಟ ಸುಜೀರುಗುತ್ತು,ವಿಶ್ವನಾಥ ಶೆಟ್ಟಿ ಕರ್ನಿರೆ,ಕೆಕೆ ಶೆಟ್ಟಿ ಕುತ್ತಿಕಾರ್,ಕೆಪಿ ಶೆಟ್ಟಿ ಮೊಡಂಕಾಪುಗುತ್ತು,ರಘು ಎಲ್.ಶೆಟ್ಟಿ ಮುಂಬಯಿ,ಸುಧಾಕರ ಶೆಟ್ಟಿ ಮುಗರೋಡಿ,ರೋಹಿತ್ ಶೆಟ್ಟಿ ನಗ್ರಿಗುತ್ತು,ಮಲ್ಲಿಕಾ ಪಕ್ಕಳ ಮಲಾರು,ಅಜಿತ್ ಚೌಟ ದೇವಸ್ಯ,ಅರವಿಂದ ಶೆಟ್ಟಿ ನಡುಮೊಗರುಗುತ್ತು,ಡಾ.ಶಿವಪ್ರಸಾದ್ ಶೆಟ್ಟಿ ಬಿಸಿರೋಡು, ಚಂದ್ರಪ್ರಕಾಶ ಶೆಟ್ಟಿ ತುಂಬೆಗುತ್ತು, ಸತೀಶ್ ಆಳ್ವ ಮುಡಾರೆ,ಡಾ.ಸತ್ಯ ಶಂಕರ್ ಶೆಟ್ಟಿ ಬಿಸಿರೋಡು,ಧೀರಜ್ ನಾಯ್ಕ್ ನಾರ್ಯನಡಿಗುತ್ತು ಮೊದಲಾದವರು ಭಾಗವಹಿಸಿದ್ದರು. 20 ಮಂದಿಸಾಧಕರಿಗೆ ವಿಂಶತಿ ಸನ್ಮಾನ:ಬಿ.ರಮಾನಾಥ ರೈ ಮಾಜಿ ಸಚಿವರು, ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ,ಡಾ.ಸತೀಶ್ ಭಂಡಾರಿ,ರವಿಶಂಕರ ಶೆಟ್ಟಿ ಬಡಾಜೆಗುತ್ತು,ಕರ್ನಲ್ ಜಗಜೀವನ ಭಂಡಾರಿ ಅಗರಿ, ವಿಠಲ ರೈ ಬಾಲಾಜಿ ಬೈಲು, ಶೀನಶೆಟ್ಟಿ ವೀರಕಂಭ,ರವಿ ಶೆಟ್ಟಿ ದೋಣಿಂಜೆಗುತ್ತು,ಸರಸ್ವತಿ ಜಿ.ರೈ ಬೋಳಂತೂರು ಗುತ್ತು,ಕಾಂತಪ್ಪ ಶೆಟ್ಟಿ ‌ಅಗರಿ, ಮಹಾಬಲ ಶೆಟ್ಟಿ ಪಟ್ಲಗುತ್ತು, ಜಯರಾಮ ರೈ ಮಲಾರು, ಸುರೇಶ ರೈ ಮಕರಜ್ಯೋತಿ, ರವೀಂದ್ರ ಕಂಬಳಿ ಸುಜೀರುಬೀಡು,ಸಚ್ಚಿದಾನಂದ ಶೆಟ್ಟಿ ಬೊಂಡಾಲ,ಸಿಎ ಯತೀಶ್ ಭಂಡಾರಿ ಬಿಸಿರೋಡು, ಪ್ರದೀಪ್ ಆಳ್ವ ಅಜೆಕಲಗುತ್ತು,ಶ್ರೀ ನಾಥ್ ಶೆಟ್ಟಿ ಮೊಡಂಕಾಪುಗುತ್ತು ,ಆನಂದ ಶೆಟ್ಟಿ ಕಾಂಪ್ರಬೈಲು,ಚೇತನ್ ರೈ ಮಾಣಿ,ಪುರಂದರ ಶೆಟ್ಟಿ ಗೋಳ್ತಮಜಲು ಇವರಿಗೆ ವಿಂಶತಿ ಸನ್ಮಾನ ಮಾಡಲಾಯಿತು. ವಿವಿಧ ವಲಯಾಧ್ಯಕ್ಷರು ವೇದಿಕೆಯಲ್ಲಿದ್ದರು. ಚಂದ್ರಹಾಸ ಶೆಟ್ಟಿ ರಂಗೋಲಿ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿದರು.ಡಾ.ಪ್ರಖ್ಯಾತ ಶೆಟ್ಟಿ ಪ್ರಾರ್ಥಿಸಿದರು. ಆಶಾ ರೈ ಮತ್ತಿತರರು ಸನ್ಮಾನ ಪತ್ರ ವಾಚಿಸಿದರು.ಭಾನುವಾರ ಬೆಳಿಗ್ಗೆ ಶೈಕ್ಷಣಿಕ,ವೃತ್ತಿಮಾರ್ಗದರ್ಶನ,ವಿಂಶತಿ ಗೌರವ,ನೃತ್ಯ ಸ್ಪರ್ಧೆ,ಯುವೋಚ್ಚಯ,ಸಂಜೆಸಮಾರೋಪ ಸಮಾರಂಭ ನಡೆಯಲಿದೆ.

Scroll to Top